ಬೆಂಗಳೂರು, ನವೆಂಬರ್ 17: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಮೈಸೂರು ಹಾಗೂ ರಮಣಶ್ರೀ ಪ್ರತಿಷ್ಠಾನ ಬೆಂಗಳೂರು ಇವರ ಸಹಯೋಗದೊಂದಿಗೆ ಹೊಟೇಲ್ ರಮಣಶ್ರೀ ಇಲ್ಲಿ ಆಯೋಜಿಸಿರುವ 17ನೇ ವರ್ಷದ “ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಹಾಗೂ ಎಸ್.ಷಡಕ್ಷರಿ ಅವರ ‘ಕ್ಷಣ ಹೊತ್ತು ಆಣಿಮುತ್ತು ’ ಭಾಗ-10 ಮತ್ತು ಭಾಗ-11ರ ಪುಸ್ತಕ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ವಸತಿ ಸಚಿವ ವಿ. ಸೋಮಣ್ಣ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷರಾದ ಗೊ. ರು. ಚನ್ನಬಸಪ್ಪ, ಎಸ್. ಷಡಕ್ಷರಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ, ಕಸಾಪ ಮಾಜಿ ಅಧ್ಯಕ್ಷ ಮನು ಬಳಿಗಾರ, ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಮತ್ತಿತರರು ಹಾಜರಿದ್ದರು.

0 Comments