ಮಕ್ಕಳ ದಿನಾಚರಣೆ ನಿಮಿತ್ತ ವಿವೇಕಾನಂದ ಕಲಾ ಕೇಂದ್ರ ಏರ್ಪಡಿಸಿದ್ದ ಮಕ್ಕಳ ಸಾಂಸ್ಕೃತಿಕೋತ್ಸವ ಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಸಂಪರ್ಕಾಧಿಕಾರಿ ಶ್ರೀ ಶಂಕರ್ ಎಸ್ ಎನ್ ಅವರು ಚಾಲನೆ ನೀಡಿದರು.
ಬಸವನಗುಡಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಈ ಮಕ್ಕಳ ಸಾಂಸ್ಕೃತಿಕೋತ್ಸವದಲ್ಲಿ ಸರ್ಕಾರಿ ಶಾಲಾ ಮಕ್ಕಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.
ರಾಜ್ಯ ಪ್ರಶಸ್ತಿ ಪುರಸ್ಕೃತ ಪ್ರಾಂಶುಪಾಲ ಶ್ರೀ ನಾಗಣ್ಣ, ಉಪ ಪ್ರಾಂಶುಪಾಲೆ ಶ್ರೀಮತಿ ಎಂ ಮಾಲಾ, ವಿವೇಕಾನಂದ ಕಲಾ ಕೇಂದ್ರದ ಡಾ. ಶ್ವೇತ, ಡಾ. ನಾಗರಾಜ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



0 Comments