ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ, ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ (ಟಿಟಿಡಿ) ದಲ್ಲಿ, ನವೆಂಬರ್ 19, ಶನಿವಾರ ಸಂಜೆ ಏರ್ಪಡಿಸಿದ್ದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮದಲ್ಲಿ, ಕು|| ದೀಪ್ತಿ ಮೋಹನ್ ಅನ್ನಮಾಚಾರ್ಯರ ಹಲವಾರು ಕೀರ್ತನೆಗಳನ್ನು ಹಾಗೂ ಹರಿದಾಸರ ಪದಗಳನ್ನು ಪ್ರಸ್ತುತ ಪಡಿಸಿದರು.
ವಾದ್ಯ ಸಹಕಾರದಲ್ಲಿ ವಿ|| ಶ್ರೀ ಮೈಸೂರು ಸಂಜೀವ್ ಕುಮಾರ್ ಪಿಟೀಲು ವಾದನದಲ್ಲಿ, ವಿ|| ಶ್ರೀ ಮುರಳಿ ನಾರಾಯಣರಾವ್ ಮೃದಂಗ ವಾದನದಲ್ಲಿ ಸಾಥ್ ನೀಡಿದರು. ಟಿ ಟಿ ಡಿ ಹೆಚ್ ಡಿ ಪಿಪಿಯ ಕಾರ್ಯಕ್ರಮಗಳ ನಿರ್ವಹಣಾಧಿಕಾರಿ ಡಾ|| ಪಿ ಭುಜಂಗ ರಾವ್ ಅವರು ವಂದನಾರ್ಪಣೆ ಮಾಡಿದರು.

0 Comments