ಬೆಂಗಳೂರು : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತ್ತೀಕೆರೆಯಲ್ಲಿರುವ ವಿದ್ಯಾ ವೈಭವ್ ಪಬ್ಲಿಕ್ ಶಾಲೆಯಲ್ಲಿ ಕರುನಾಡು ಸ್ಥಾಪನಾ ದಿನದ ನೆನಪಿಗಾಗಿ ಕನ್ನಡ ರಾಜ್ಯೋತ್ಸವವನ್ನು ಪ್ರತಿ ವರ್ಷ ಆಚರಿ
ಸುವಂತೆ, ಈ ವರ್ಷವು ಸಹ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು
ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ನಮ್ಮ ಕನ್ನಡ ನಾಡು ನುಡಿಯನ್ನು ಬಿಂಬಿಸುವ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಮಕ್ಕಳು ಉತ್ಸಾಹದಿಂದ ಪ್ರಸ್ತುತಪಡಿಸಿದರು. ಈ ವೇಳೆ ಸಂಸ್ಥೆಯ ಅಧ್ಯಕ್ಷ ಕಿರಣ್ ಪ್ರಸಾದ್, ಕಾರ್ಯದರ್ಶಿ ಶ್ರೀಮತಿ ಶ್ರೀ ಶುಭಾ ಪ್ರಸಾದ್ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.



0 Comments