ಕೊಳ್ಳೇಗಾಲ ಸುದ್ದಿ : ಮಹಾರಾಷ್ಟ್ರದ ಎಂಇಎಸ್ ಸಂಘಟನೆಯ ಪುಂಡಾಟಿಕೆಯನ್ನು ವಿರೋಧಿಸಿ ಕೊಳ್ಳೇಗಾಲದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯಿಂದ ಪ್ರತಿಭಟನೆ,
ಮಹಾರಾಷ್ಟ್ರದ ಎಂಇಎಸ್ ಸಂಘಟನೆಯ ಕಿಡಿಗೇಡಿಗಳು ಕರ್ನಾಟಕ ರಸ್ತೆ ಸಾರಿಗೆ ಬಸ್ ಗಳಿಗೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿರುವುದನ್ನ ಖಂಡಿಸಿ, ಹಾಗೂ ಮಹಾರಾಷ್ಟ್ರ ದಲ್ಲಿರುವ ಕನ್ನಡಿಗರ ಮೇಲೆ ಕರ್ನಾಟಕದ ಬೆಳೆಗಾವಿ ಕನ್ನಡಿಗರ ಮೇಲೆ ಪದೆ ಪದೆ ಹಲ್ಲೆ ನಡೆಸುತ್ತಿರುವುದನ್ನ ಖಂಡಿಸಿ ಕೊಳ್ಳೇಗಾಲ ಕರ್ನಾಟಕ ರಕ್ಷಣಾ ವೇದಿಕೆ ಕೊಳ್ಳೇಗಾಲ ಘಟಕ ವತಿಯಿಂದ ಕೊಳ್ಳೇಗಾಲ ಪಟ್ಟಣದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು,
ಮಹಾರಾಷ್ಟ್ರದಲ್ಲಿ ಗಡಿ ಕ್ಯಾತೆ ತೆಗೆದು ಕರ್ನಾಟಕ ರಸ್ತೆ ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂ ಗೊಳಿಸುತ್ತಿರುವ ಹಾಗೂ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ಮೇಲೆ ಮತ್ತು ಕರ್ನಾಟಕದ ಬೆಳಗಾವಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿ ಪುಂಡಾಟಿಕೆ ನಡೆಸುತ್ತಿರುವ ಎಂ.ಇ.ಎಸ್ ಸಂಘಟನೆಯ ದುಸ್ಕೃತ್ಯವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕೊಳ್ಳೇಗಾಲ ಘಟಕ ವತಿಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರಕ್ಕೆ ಒತ್ತಡ ಏರಿ ಮಹಾರಾಷ್ಟ್ರದ ಎಂ.ಇ.ಎಸ್ ಸಂಘಟನೆಯನ್ನು ರದ್ದುಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಕೊಳ್ಳೇಗಾಲ ತಹಸೀಲ್ದಾರ್ ಮಂಜುಳಾರವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು,
ಈ ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣೆ ವೇದಿಕೆ ಜಿಲ್ಲಾಧ್ಯಕ್ಷ ಮೋಹನ್, ತಾಲ್ಲೂಕು ಅಧ್ಯಕ್ಷ ಅವಿನಾಶ್, ಪ್ರಧಾನ ಕಾರ್ಯದರ್ಶಿ ವಿನೋದ್, ಹಾಗೂ ಇನ್ನಿತರರು ಬಾಗಿಯಾಗಿದ್ದರು,
.jpeg)

0 Comments