Ticker

6/recent/ticker-posts

Ad Code

Responsive Advertisement

ಶ್ರೀ ಅಭಯ ಲಕ್ಷ್ಮೀನರಸಿಂಹಸ್ವಾಮಿಗೆ 108 ಲೀಟರ್ ಕ್ಷೀರಾಭಿಷೇಕ, ಭಜನೆ ಮತ್ತು ದಾಸವಾಣಿ

ತ್ಯಾಗರಾಜನಗರದ 'ವಜ್ರಕ್ಷೇತ್ರ' ಶ್ರೀ ಅಭಯ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಫೆಬ್ರವರಿ 12, ಭಾನುವಾರದಂದು ಸ್ವಾತಿ ನಕ್ಷತ್ರ ದಿನದ ಪ್ರಯುಕ್ತ ಅಂದು ಬೆಳಗ್ಗೆ ಸ್ವಾಮಿಗೆ 108 ಲೀಟರ್ ಕ್ಷೀರಾಭಿಷೇಕ, ವಿಶೇಷ ಅಲಂಕಾರ, ಚಾಮರಾಜಪೇಟೆಯ ಶ್ರೀ ರಾಮ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ಮಹಾಮಂಗಳಾರತಿ, ತೀರ್ಥ-ಪ್ರಸಾದ ವಿತರಣೆಯಾಯಿತು.

ಸಂಜೆಯ ಗಾಯನ ಕಾರ್ಯಕ್ರಮದಲ್ಲಿ ಪ್ರಸಿದ್ಧ ಹರಿದಾಸರುಗಳು ಶ್ರೀ ನರಸಿಂಹಸ್ವಾಮಿಯ ಮೇಲೆ ರಚಿಸಿದ ಹಲವು ಕೃತಿಗಳನ್ನು ಕು|| ಸುಶ್ರಾವ್ಯ ಆಚಾರ್ಯ ಅವರು ಹೆಸರಿಗೆ ತಕ್ಕಂತೆ ಬಹಳ ಸುಶ್ರಾವ್ಯವಾಗಿ ಹಾಡಿದರು. ನಂತರ ಅಷ್ಟಾವಧಾನ, ಮಹಾಮಂಗಳಾರತಿ, ತೀರ್ಥ-ಪ್ರಸಾದ ವಿತರಣೆಯಾಯಿತು. ಇಂದು ಜರುಗಿದ ವಿಶೇಷ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸ್ವಾಮಿ ಕೃಪೆಗೆ ಪಾತ್ರರಾದರು ಎಂದು ದೇವಸ್ಥಾನದ ಗೌರವ ಕಾರ್ಯದರ್ಶಿಗಳಾದ ಶ್ರೀ ನರಹರಿ ಆಚಾರ್ ಅವರು ತಿಳಿಸಿದರು.

Post a Comment

0 Comments

Ad Code

Responsive Advertisement