ಬೆಂಗಳೂರು : ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಭಾಸ್ಕರ್ ರಾವ್ ರವರು ಇಂದು ಬುಧವಾರದಂದು, ತಮ್ಮ ನಾಮಪತ್ರವನ್ನು ಸಲ್ಲಿಸಲು . ಬೆಳಗ್ಗೆ ಸಂಗಮ್ ವೃತ್ತ (ಜೆಜೆನಗರ ಪೋಲಿಸ್ ಠಾಣೆ ಮುಂಭಾಗ) ದಿಂದ ಅಪಾರ ಜನಸ್ತೋಮದೊಂದಿಗೆ, ಮೆರವಣಿಗೆ ಮೂಲಕ ತೆರಳಿ ಗೂಡ್ ಶೆಡ್ ರಸ್ತೆಯಲ್ಲಿರುವ ಮತದಾರರ ನೊಂದಣಿ ಅಧಿಕಾರಿಗಳ ಕಛೇರಿಯಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿಗಳಾದ ಅರುಣ್ ಸಿಂಗ್, ಸಂಸದರಾದ ಪಿ.ಸಿ.ಮೋಹನ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಮಂಜುನಾಥ್ ಮುಂತಾದ ಬಿಜೆಪಿ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳು, ಮಾಜಿ ಬಿಬಿಎಂಪಿ ಸದಸ್ಯರ ಸಹಕಾರದೊಂದಿಗೆ, ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.


0 Comments