Ticker

6/recent/ticker-posts

Ad Code

Responsive Advertisement

ಪಲ್ಲವಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡಿ : ಅಖಿಲ ಕರ್ನಾಟಕ ಕುಳುವ ಮಹಾಸಂಘ ಒತ್ತಾಯ

ಬೆಂಗಳೂರು: ಸಾಮಾಜಿಕ ನ್ಯಾಯದಡಿ ಪರಿಶಿಷ್ಟ ಜಾತಿಯ ಅಲೆಮಾರಿ ಕೊರಮ-ಕೊರಚ (ಕುಳುವ) ರಾಜ್ಯದ ಏಕೈಕ ಅಭ್ಯರ್ಥಿ  ಪಲ್ಲವಿ.ಜಿ ಅವರಿಗೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭೆಯ ಮೀಸಲು ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್‌ ಅಂತಿಮಗೊಳಿಸುವಂತೆ ಅಖಿಲ ಕರ್ನಾಟಕ ಕುಳುವ ಮಹಾ ಸಂಘ ಒತ್ತಾಯಿಸಿದೆ.



ಸಂಘದ ಅಧ್ಯಕ್ಷ ಶಿವಾನಂದ ಎಂ. ಭಜಂತ್ರಿ ಮಾತನಾಡಿ,  ರಾಜ್ಯದಲ್ಲಿ 10-12ಲಕ್ಷ ಜನಸಂಖ್ಯೆಯುಳ್ಳ ಕೊರಮ-ಕೊರಚ ಕುಳುವ ಜನಾಂಗ 5ನೇ ಅತಿದೊಡ್ಡ ಸಮುದಾಯವಾಗಿದ್ದು, ಪಲ್ಲವಿ ಅವರು ದಶಕಗಳಿಂದಲೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ತಳಮಟ್ಟದಿಂದ ದುಡಿದ್ದಾರೆ. ಸಮುದಾಯದ ಶ್ರೇಯೋಭಿವೃದ್ದಿಗೆ  ಅತ್ಯಂತ ನಿಷ್ಠೆ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ.  ಶಿವಮೊಗ್ಗ ಗ್ರಾಮಾಂತರ ಮೀಸಲು ಮತಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.  ಸಂಭವನೀಯ 2ನೇ ಪಟ್ಟಿಯಲ್ಲಿ ಸ್ಥಳೀಯ ಆಕಾಂಕ್ಷಿ  ಪಲ್ಲವಿ.ಜಿ ಹೆಸರು ಅಂತಿಮವಾಗಿದ್ದರೂ ಸಹ, ಪರಿಶಿಷ್ಟ ಜಾತಿಯ ಬಲಾಡ್ಯ ಒಳ ಜಾತಿಗಳು ಷಡ್ಯಂತ್ರ ನಡೆಸಿದ್ದು ಕ್ಷೇತ್ರದ ಪರಿಚಯವೇ ಇಲ್ಲದ, ಜನರ ಗುರುತೇ ಇಲ್ಲದ ದೂರದ ರಾಯಚೂರಿನ ವ್ಯಕ್ತಿಗೆ ಅವಕಾಶ ನೀಡಲು ಪ್ರಯತ್ನ ನಡೆಸುತ್ತಿದೆ.  ಸಾಮಾಜಿಕ ನ್ಯಾಯ ಮತ್ತು ಕಾಂಗ್ರೆಸ್ ತತ್ವಸಿದ್ಧಾಂತಕ್ಕೆ ಬದ್ಧರಾಗಿರುವವರಿಗೆ ಅವಕಾಶ ಕಲ್ಪಿಸಬೇಕು. ಸಮಾಜದ ಕಟ್ಟಕಡೆಯ ಅವಕಾಶ ವಂಚಿತ ಅಲೆಮಾರಿ ಕುಳುವ ಸಮುದಾಯಕ್ಕೆ ಅನ್ಯಾಯವೆಸಗುವ ಕೆಲಸ ಆಗಬಾರದು ಎಂದು ಹೇಳಿದ್ದಾರೆ.

Post a Comment

0 Comments

Ad Code

Responsive Advertisement