ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ವಿಧಾನಸಭಾ ಚುನಾವಣೆ ಅಂದವಾಗಿ ಕಡ್ಡಾಯ ಮತದಾನಕ್ಕಾಗಿ ಜಾಗೃತಿ ಮೂಡಿಸಲು ಕಾಲ್ನಡಿಗೆ ಜಾಥ ಮತ್ತು ಬೀದಿ ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಬ್ಬನ್ ಮುಖ್ಯದ್ವಾರದಿಂದ ಪ್ರಾರಂಭವಾಗಿ ಕಸ್ತೂರಬಾ ರಸ್ತೆ ಹಾದಿಯಲ್ಲಿ ಹೋಗಿ ಕಂಠೀರವ ಕ್ರೀಡಾಂಗಣದ ಒಳಾಂಗಣದ ರಸ್ತೆಯಲ್ಲಿ ಬಂದು ರಾಜಾರಾಮ್ ಮೋಹನ್ ರಾಯ್ ರಸ್ತೆಯ ಹಾದಿಯಲ್ಲಿ ನಡೆದು ಬಿಬಿಎಂಪಿ ನೌಕರರ ಸಂಘದ ಬಳಿ ಮುಕ್ತಾಯಗೊಳ್ಳುವುದು.
ಮತದಾನ ಜಾಗೃತಿ ಕಾಲ್ನಡಿಗೆ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳು , ನೌಕರರು ಭಾಗವಹಿಸಲಿದ್ದಾರೆ.
ಸಾರ್ವಜನಿಕರು ಸಹ ಭಾಗವಹಿಸಬಹುದು , ಬೆಂಗಳೂರುನಗರ ಪ್ರದೇಶದಲ್ಲಿ ಮತದಾರರು ನಿರ್ಭಿತಿಯಿಂದ, ಭಯಮುಕ್ತರಾಗಿ ಹಾಗೂ ಸಂವಿಧಾನ ಕೊಟ್ಟಿರುವ ಮತದಾನದ ಹಕ್ಕನ್ನು ಮತದಾರರ ಸದುಪಯೋಗ ಪಡಿಸಿಕೊಳ್ಳಬೇಕು ಎಂಬ ಉದ್ದೇಶ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

0 Comments